ಕೃಷ್ಣಾ ನದಿಗೆ ಟ್ರ್ಯಾಕ್ಟರ್ ಪಲ್ಟಿ; ಇಬ್ಬರು ನಾಪತ್ತೆ
ನೆರೆಯ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲೂಕಿನ ಅಕಿವಾಟ್-ಬಸ್ತವಾಡ್ ರಸ್ತೆಯಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್ ಆಕಸ್ಮಿಕವಾಗಿ ಕೃಷ್ಣಾ ನದಿಯ ಪ್ರವಾಹದಲ್ಲಿ ಪಲ್ಟಿಯಾಗಿದ್ದು, ಟ್ರ್ಯಾಕ್ಟರ್ನಲ್ಲಿದ್ದ ಇಬ್ಬರು ನಾಪತ್ತೆಯಾಗಿದ್ದು. ಆರು ಜನರು ಸುರಕ್ಷಿತವಾಗಿ ನದಿಯಿಂದ ಹೊರ ಬಂದಿರುವ ಘಟನೆ ನಡೆದಿದೆ.
ಅಕಿವಾಟ , ಗ್ರಾಮಕ್ಕೆ ಕುಡಿಯುವ ನೀರು ಒದಗಿಸಲು ಮೋಟಾರ್ ಸ್ಟಾರ್ಟ್ ಮಾಡಲು ಅಕಿವಾಟ್ – ಬಸ್ತವಾಡ್ ರಸ್ತೆಯಿಂದ ಟ್ರ್ಯಾಕ್ಟರ್ ಹೋಗುತ್ತಿತ್ತು. ಈ ವೇಳೆ ಸುಮಾರು ೮ ಮಂದಿ ಪ್ರಯಾಣಿಕರಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಸದ್ಯ ಕೃಷ್ಣಾ ನದಿಯಲ್ಲಿ ಉಂಟಾದ ಮಹಾಪೂರದಿಂದ ನೀರಿನ ಹರಿವಿಗೆ ಎಲ್ಲರೂ ಕೊಚ್ಚಿ ಹೋಗಿದ್ದಾರೆ.
ಈ ಘಟನೆಯ ಬಗ್ಗೆ ತಿಳಿದ ತಕ್ಷಣ ತಾಲೂಕ ಆಡಳಿತ ಯಾಂತ್ರಿಕ ದೋಣಿ ಮೂಲಕ ವಿಪತ್ತು ನಿರ್ವಹಣಾ ಸಿಬ್ಬಂದಿಯ ಸಹಾಯದಿಂದ ಜನರಿಗಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಇವರಲ್ಲಿ ಆರು ಮಂದಿಯನ್ನು ಪತ್ತೆ ಹಚ್ಚಿ ಜೀವ ಉಳಿಸಲು ಸಾಧ್ಯವಾಗಿದೆ.