ಸಂಭ್ರಮದಿಂದ ಜರುಗಿದ ಶ್ರೀವಿಜಯ ಮಹಾಂತ ಶಿವಯೋಗಿಗಳ ಅಡ್ಡಪಲ್ಲಕ್ಕಿ ಮಹೋತ್ಸವ
ಬಾಗಲಕೋಟ : ಜಿಲ್ಲೆಯ ಇಳಕಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ಚಿತ್ತರಗಿ ಶ್ರೀವಿಜಯ ಮಹಾಂತ ಶಿವಯೋಗಿಗಳ ಶಾಖಾ ಮಠದಲ್ಲಿ ಗುರುವಾರದಂದು ಅಡ್ಡಪಲ್ಲಕ್ಕಿ ಉತ್ಸವ ಸಡಗರ ಸಂಭ್ರಮದಿಂದ ಜರುಗಿತು.

ಮುಂಜಾನೆ ಶ್ರೀವಿಜಯ ಮಹಾಂತ ಶಿವಯೋಗಿಗಳ ಗದ್ದುಗೆಗೆ ವಿಶೇಷ ಪೂಜೆ ಅಭಿಷೇಕ ಜರುಗಿತು.
ನಂತರ ಶಿವಯೋಗಿಗಳ ಅಡ್ಡಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು.
ಗ್ರಾಮದ ಭಕ್ತರು ಅಡ್ಡಪಲ್ಲಕ್ಕಿಗೆ ಪೂಜೆಯನ್ನು ಸಲ್ಲಿಸಿ ತಮ್ಮ ಭಕ್ತಿಯನ್ನು ಮೆರೆದರು.
ವರದಿ : ಭೀಮಣ್ಣ ಗಾಣಿಗೇರ (ಇಳಕಲ್ಲ)






