Ambedkar Parinirvahana Day ಅಂಬೇಡ್ಕರ್ ಪರಿನಿರ್ವಾಣ ದಿನ : ಭವನದಲ್ಲಿ ಶ್ರದ್ಧಾಂಜಲಿ ಅರ್ಪಿಸಿದ ಸದಸ್ಯರು
ಇಳಕಲ್ : ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ದಲಿತ ಹಿತರಕ್ಷಣಾ ವೇದಿಕೆ ಸದಸ್ಯರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ, ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ತತ್ವಗಳು, ದಲಿತರ ಹಕ್ಕುಗಳ ಪರ ಹೋರಾಟ, ಮತ್ತು ಸಮಾನತೆಯ ಸ್ಥಾಪನೆಯಲ್ಲಿ ಅವರ ಅನನ್ಯ ಕೊಡುಗೆಗಳನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಸತ್ಯ ಶೋಧಕ ಸಂಘದ ರಾಜ್ಯಾಧ್ಯಕ್ಷರಾದ ಪರಶುರಾಮ ಮಹಾರಾಜನವರ್ , ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಶರಣಪ್ಪ ಆಮದಿಹಾಳ,
ಉಪಾಧ್ಯಕ್ಷ ಯುವರಾಜ ಚಲವಾದಿ, ಪ್ರಧಾನ ಕಾರ್ಯದರ್ಶಿ ಆನಂದ ಚಲವಾದಿ, ನಗರಸಭೆ ಸದಸ್ಯ ಸುರೇಶ ಜಂಗ್ಲಿ,
ಮುಖಂಡರಾದ ಭೀಮಣ್ಣ ಗೋನಾಳ, ಸಂಗಮೇಶ ಜಂಗ್ಲಿ , ಅಂಬಣ್ಣ ಚಲವಾದಿ,ದೀಲಿಪ್ ಕಲ್ಮನಿ, ಗೈಬು ಚಲವಾದಿ ,
ರವಿ ಬೇಗಾರ, ಪ್ರವೀಣ ಹೋಳಿ, ಸಿದ್ಧಾರ್ಥ ಚಲವಾದಿ, ಪ್ರಶಾಂತ ಚಲವಾದಿ ಇತರರು ಉಪಸ್ಥಿತರಿದ್ದರು.