ಬಾಗಲಕೋಟ ಜಿಲ್ಲೆಯ ಇಳಕಲ್ದ ಎಸ್.ಆರ್.ಎನ್.ಇ ಪೌಂಡೇಶನ್ ಕಾರ್ಯಾಲಯದಲ್ಲಿ ಬುಧವಾರ ಸಾಯಂಕಾಲ ೬ ಗಂಟೆಗೆ ಎಸ್.ಆರ್.ನವಲಿಹಿರೇಮಠ ಅವರಿಂದ ಸುದ್ದಿಗೋಷ್ಠಿ ನಡೆಯಿತು.
೨೦೨೪ ಲೋಕಸಭೆ ಚುನಾವಣೆಯ ಅಂಗವಾಗಿ ಬಾಗಲಕೋಟೆಯ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಬೆಂಬಲಿಸವುದಾಗಿ ಅವರು ಮಾತನಾಡಿ ನನ್ನ ಮುಖಂಡರು ಮತ್ತು ಕಾಯ ðಕರ್ತರೊಂದಿಗೆ ಚರ್ಚಿಸಿ ಯಾವ ಪಕ್ಷಕ್ಕೆ ಬೆಂಬಲಿಸಬೇಕು ಅಥವಾ ಸುಮ್ಮನೆ ಇರಬೇಕೋ ಎಂಬುವದನ್ನು ನಾನು ಒಂದು ವಾರದ ಒಳಗೆ ಮತ್ತೊಮ್ಮೆ ಸುದ್ದಿಗೋಷ್ಠಿಯನ್ನು ನಡೆಸಿ ತಿಳಿಸುತ್ತೇನೆ ಎಂದರು. ಈಗಾಗಲೇ ಸಚಿವ ಶಿವಾನಂದ ಪಾಟೀಲ ಅವರು ನನ್ನನ್ನು ಸಂಪರ್ಕ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಅವರನ್ನು ಬೆಂಬಲಿಸುವAತೆ ಅವರು ಕೇಳಿದ್ದಾರೆ.
ಅದೇ ರೀತಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಕೂಡ ನನ್ನನ್ನು ಸಂಪರ್ಕಿಸಿ ಬೆಂಬಲ ಸೂಚಿಸುವಂತೆ ಅವರು ಕೇಳಿಕೊಂಡಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಎಸ್.ಆರ್.ಎನ್.ಇ.ಪೌಂಡೇಶನ್ ಪದಾಧಿಕಾರಿಗಳು ಉಪಸ್ಥಿತರಿದ್ದರು.