ಹುನಗುಂದ ಪಟ್ಟಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ
ಡಾ.ಬಾಬು ಜಗಜೀವನರಾಂ ಜಯಂತಿ ಆಚರಣೆ
ಬಾಗಲಕೋಟ ಜಿಲ್ಲೆಯ ಹುನಗುಂದ ತಹಸೀಲ್ದಾರ ಕಚೇರಿಯಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ ೧೧೭ ನೇ ಜಯಂತಿಯನ್ನು ಶುಕ್ರವಾರದ ಮುಂಜಾನೆ ೧೧ ಗಂಟೆಗೆ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ ನಿಂಗಪ್ಪ ಬಿರಾದಾರ ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಈ ಸಮಯದಲ್ಲಿ ಹುನಗುಂದ ಸಿಪಿಐ ಸುನೀಲ ಸವದಿ, ಚುನಾವಣಾಧಿಕಾರಿ ಶ್ರೀಧರ ಗೋಟೂರ, ಬಿಇಒ ಜಾಸ್ಮೀನ ಕಿಲ್ಲೇದಾರ, ಚಂದ್ರು ತಳವಾರ, ಉಪತಹಸೀಲ್ದಾರ ಈಶ್ವರ ಗಡ್ಡಿ, ನಾಗರಾಜ ಹೊಸೂರ, ರವಿ ಮಸ್ಕಿ, ಶಾಂತು ಮೂಕಿ.ವಿಜಯ ಭಾವಿಕಟ್ಟಿ,ಸಾಂತಪ್ಪ ಮಸ್ಕಿ, ಯಮನೂರ ಮೇಟಿ ಸೇರಿದಂತೆ ಇತರರು ಇದ್ದರು.